Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:5 - ಕನ್ನಡ ಸತ್ಯವೇದವು C.L. Bible (BSI)

5 ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:5
22 ತಿಳಿವುಗಳ ಹೋಲಿಕೆ  

ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.


ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ.


ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.


ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು