Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:3 - ಕನ್ನಡ ಸತ್ಯವೇದವು C.L. Bible (BSI)

3 ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:3
13 ತಿಳಿವುಗಳ ಹೋಲಿಕೆ  

ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II


“ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು