Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:27 - ಕನ್ನಡ ಸತ್ಯವೇದವು C.L. Bible (BSI)

27 ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:27
17 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು.


ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು