Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:1
27 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು