Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:120 - ಕನ್ನಡ ಸತ್ಯವೇದವು C.L. Bible (BSI)

120 ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

120 ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

120 ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

120 ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:120
20 ತಿಳಿವುಗಳ ಹೋಲಿಕೆ  

ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ಮೂಷೀಯ ಮಕ್ಕಳು: ಮಹ್ಲೀ, ಏದೆರ್, ಯೆರೀಮೋತ್ ಎಂಬವರು.


ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,


ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು