Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:18 - ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:18
17 ತಿಳಿವುಗಳ ಹೋಲಿಕೆ  

ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.


ಆಗ ನೋಡುವವರ ಕಣ್ಣು ಮಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು