Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:32 - ಕನ್ನಡ ಸತ್ಯವೇದವು C.L. Bible (BSI)

32 ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:32
17 ತಿಳಿವುಗಳ ಹೋಲಿಕೆ  

ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II


ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು