Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:57 - ಕನ್ನಡ ಸತ್ಯವೇದವು C.L. Bible (BSI)

57 ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:57
16 ತಿಳಿವುಗಳ ಹೋಲಿಕೆ  

“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು.


ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು