Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:4 - ಕನ್ನಡ ಸತ್ಯವೇದವು C.L. Bible (BSI)

4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:4
19 ತಿಳಿವುಗಳ ಹೋಲಿಕೆ  

ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಸೇರಿಸಿಟ್ಟಿರುವನಾತ ಮಾರಕಾಸ್ತ್ರಗಳನು I ಗುರಿಯಿಟ್ಟು ನಿಂತಿರುವನು ಅಗ್ನಿಬಾಣಗಳನು II


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು