Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 123:2 - ಕನ್ನಡ ಸತ್ಯವೇದವು C.L. Bible (BSI)

2 ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 123:2
14 ತಿಳಿವುಗಳ ಹೋಲಿಕೆ  

ತಿರುಗಿದೆ ಎನ್ನ ನಯನ ಪ್ರಭುವಿನತ್ತ I ಉರುಲಿಂದ ಕಾಲನು ಕಳಚಿದನಾತ II


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.


ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು