Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 124:3 - ಕನ್ನಡ ಸತ್ಯವೇದವು C.L. Bible (BSI)

3 ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 124:3
18 ತಿಳಿವುಗಳ ಹೋಲಿಕೆ  

ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II


ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.


ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು