Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:5 - ಕನ್ನಡ ಸತ್ಯವೇದವು C.L. Bible (BSI)

5 ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:5
28 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.


ಅವರ ಮಾರ್ಗ ಅಂಕು, ಅವರ ನಡತೆ ಡೊಂಕು.


ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.


ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು