Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:2 - ಕನ್ನಡ ಸತ್ಯವೇದವು C.L. Bible (BSI)

2 ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:2
21 ತಿಳಿವುಗಳ ಹೋಲಿಕೆ  

ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು