Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 127:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 127:1
35 ತಿಳಿವುಗಳ ಹೋಲಿಕೆ  

ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ನಿರ್ಮಿಸಿದನು ತನ್ನ ಮಂದಿರವನು ಪರ್ವತದಂತೆ I ಶಾಶ್ವತವಾಗಿ ತಾನು ಸ್ಥಾಪಿಸಿದ ಭೂಮಿಯಂತೆ II


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.


ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.


ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು