Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 131:1 - ಕನ್ನಡ ಸತ್ಯವೇದವು C.L. Bible (BSI)

1 ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 131:1
26 ತಿಳಿವುಗಳ ಹೋಲಿಕೆ  

ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು