Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:12 - ಕನ್ನಡ ಸತ್ಯವೇದವು C.L. Bible (BSI)

12 “ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವದಾದರೆ ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕೂತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:12
11 ತಿಳಿವುಗಳ ಹೋಲಿಕೆ  

ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು