Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:1 - ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:1
27 ತಿಳಿವುಗಳ ಹೋಲಿಕೆ  

ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು