Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:5 - ಕನ್ನಡ ಸತ್ಯವೇದವು C.L. Bible (BSI)

5 ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:5
23 ತಿಳಿವುಗಳ ಹೋಲಿಕೆ  

ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು