Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:14 - ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:14
15 ತಿಳಿವುಗಳ ಹೋಲಿಕೆ  

“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಇದಕ್ಕೊದಗಿಸುವೆನು ಧಾರಾಳ ಸಿರಿಸಂಪತ್ತನು I ಅನ್ನದಿಂದ ತೃಪ್ತಿಪಡಿಸುವೆನಿಲ್ಲಿಯ ದಲಿತರನು II


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು