Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:15 - ಕನ್ನಡ ಸತ್ಯವೇದವು C.L. Bible (BSI)

15 ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ; ಆತನ ವಾಕ್ಯವು ಬಹುವೇಗಶಾಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:15
10 ತಿಳಿವುಗಳ ಹೋಲಿಕೆ  

ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು