Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:4
17 ತಿಳಿವುಗಳ ಹೋಲಿಕೆ  

ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I ಆತನ ಸತ್ಯಪರತೆ ಇರುವುದು ಅನಂತ ಕಾಲ II


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು