Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 15:5 - ಕನ್ನಡ ಸತ್ಯವೇದವು C.L. Bible (BSI)

5 ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 15:5
29 ತಿಳಿವುಗಳ ಹೋಲಿಕೆ  

“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ದುಷ್ಟತನದಿಂದ ಯಾವನೂ ಸ್ಥಿರತೆಯನ್ನು ಗಳಿಸಿಲ್ಲ; ಶಿಷ್ಟನ ಬೇರನ್ನು ಯಾರೂ ಕದಲಿಸುವಂತಿಲ್ಲ.


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು