Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:5 - ಕನ್ನಡ ಸತ್ಯವೇದವು C.L. Bible (BSI)

5 ಆತನನ್ನು ಸ್ತುತಿಸಿರಿ ತಾಳದಿಂದ I ಆತನನ್ನು ಸ್ತುತಿಸಿರಿ ಝಲ್ಲರಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:5
9 ತಿಳಿವುಗಳ ಹೋಲಿಕೆ  

ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.


ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:


ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು.


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು