Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:5
28 ತಿಳಿವುಗಳ ಹೋಲಿಕೆ  

ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.


ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು