Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:13 - ಕನ್ನಡ ಸತ್ಯವೇದವು C.L. Bible (BSI)

13 ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:13
18 ತಿಳಿವುಗಳ ಹೋಲಿಕೆ  

ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು.


ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು