Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:4 - ಕನ್ನಡ ಸತ್ಯವೇದವು C.L. Bible (BSI)

4 ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:4
18 ತಿಳಿವುಗಳ ಹೋಲಿಕೆ  

ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು