Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:50 - ಕನ್ನಡ ಸತ್ಯವೇದವು C.L. Bible (BSI)

50 ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:50
20 ತಿಳಿವುಗಳ ಹೋಲಿಕೆ  

ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು