Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:3 - ಕನ್ನಡ ಸತ್ಯವೇದವು C.L. Bible (BSI)

3 ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣಕಿರೀಟವನ್ನು ಇಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:3
16 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


ನನ್ನ ಮೇಲೆರಗಿದ್ದರೂ ಹಗೆಗಳು ದುರಂತಕಾಲದಲಿ I ನನಗುದ್ಧಾರಕನಾದ ಪ್ರಭು, ಆ ವಿಪತ್ಕಾಲದಲಿ II


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು