Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ರಕ್ಷಣಕಾರ್ಯದಿಂದ ಅವನ ಘನತೆಯು ಬಹು ವೃದ್ಧಿಯಾಯಿತು; ಮಹಿಮಪ್ರಭಾವಗಳನ್ನು ಅವನಿಗೆ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:5
24 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು