Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:28 - ಕನ್ನಡ ಸತ್ಯವೇದವು C.L. Bible (BSI)

28 ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:28
11 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು