Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:5 - ಕನ್ನಡ ಸತ್ಯವೇದವು C.L. Bible (BSI)

5 ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ; ನಿಮ್ಮಲ್ಲಿ ಭರವಸೆಯಿಟ್ಟಿದ್ದರಿಂದ ಅವರು ಅಪಮಾನಕ್ಕೆ ಗುರಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:5
17 ತಿಳಿವುಗಳ ಹೋಲಿಕೆ  

ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ I ಆಶಾಭಂಗವಾಗದಿರಲೆಂದು ನಾ ಬೇಡುವೆ II


ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II


ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು