Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:9 - ಕನ್ನಡ ಸತ್ಯವೇದವು C.L. Bible (BSI)

9 ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡಿಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:9
28 ತಿಳಿವುಗಳ ಹೋಲಿಕೆ  

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II


ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.


ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು