Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:11 - ಕನ್ನಡ ಸತ್ಯವೇದವು C.L. Bible (BSI)

11 ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:11
19 ತಿಳಿವುಗಳ ಹೋಲಿಕೆ  

ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು