Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:1 - ಕನ್ನಡ ಸತ್ಯವೇದವು C.L. Bible (BSI)

1 ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:1
45 ತಿಳಿವುಗಳ ಹೋಲಿಕೆ  

ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ I ದೇವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ II


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು