Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:3 - ಕನ್ನಡ ಸತ್ಯವೇದವು C.L. Bible (BSI)

3 ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:3
17 ತಿಳಿವುಗಳ ಹೋಲಿಕೆ  

ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?


ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು