Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:5 - ಕನ್ನಡ ಸತ್ಯವೇದವು C.L. Bible (BSI)

5 ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:5
26 ತಿಳಿವುಗಳ ಹೋಲಿಕೆ  

ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು