Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:8 - ಕನ್ನಡ ಸತ್ಯವೇದವು C.L. Bible (BSI)

8 ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:8
22 ತಿಳಿವುಗಳ ಹೋಲಿಕೆ  

“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು.


ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.


ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II


ಬೆಳಗಿಸಲಿ ದಾಸನನು ನಿನ್ನ ಮುಖತೇಜವು I ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು II


ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II


ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು