Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:14 - ಕನ್ನಡ ಸತ್ಯವೇದವು C.L. Bible (BSI)

14 ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:14
15 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


“ನೀನೆ ನನ್ನ ದೇವರು” ಎಂದೆ ಪ್ರಭುವಿಗೆ I ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ II


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II


ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು