Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:15 - ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಜೀವವು ನಿನ್ನ ಕೈಯಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:15
31 ತಿಳಿವುಗಳ ಹೋಲಿಕೆ  

ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.


ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು.


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು