Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:23 - ಕನ್ನಡ ಸತ್ಯವೇದವು C.L. Bible (BSI)

23 ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿ ತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:23
22 ತಿಳಿವುಗಳ ಹೋಲಿಕೆ  

ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು