Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:12
17 ತಿಳಿವುಗಳ ಹೋಲಿಕೆ  

ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು