Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:9 - ಕನ್ನಡ ಸತ್ಯವೇದವು C.L. Bible (BSI)

9 ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:9
17 ತಿಳಿವುಗಳ ಹೋಲಿಕೆ  

ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು