Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:6 - ಕನ್ನಡ ಸತ್ಯವೇದವು C.L. Bible (BSI)

6 ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:6
31 ತಿಳಿವುಗಳ ಹೋಲಿಕೆ  

ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು