Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:5 - ಕನ್ನಡ ಸತ್ಯವೇದವು C.L. Bible (BSI)

5 ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:5
19 ತಿಳಿವುಗಳ ಹೋಲಿಕೆ  

ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”


ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು