Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:3 - ಕನ್ನಡ ಸತ್ಯವೇದವು C.L. Bible (BSI)

3 ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:3
18 ತಿಳಿವುಗಳ ಹೋಲಿಕೆ  

ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು