Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:2 - ಕನ್ನಡ ಸತ್ಯವೇದವು C.L. Bible (BSI)

2 ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:2
16 ತಿಳಿವುಗಳ ಹೋಲಿಕೆ  

ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು.


ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು