Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:6 - ಕನ್ನಡ ಸತ್ಯವೇದವು C.L. Bible (BSI)

6 ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:6
14 ತಿಳಿವುಗಳ ಹೋಲಿಕೆ  

ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು