Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:9 - ಕನ್ನಡ ಸತ್ಯವೇದವು C.L. Bible (BSI)

9 ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:9
19 ತಿಳಿವುಗಳ ಹೋಲಿಕೆ  

ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II


ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು