Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:3 - ಕನ್ನಡ ಸತ್ಯವೇದವು C.L. Bible (BSI)

3 ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:3
26 ತಿಳಿವುಗಳ ಹೋಲಿಕೆ  

ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II


ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.


ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು