Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:12 - ಕನ್ನಡ ಸತ್ಯವೇದವು C.L. Bible (BSI)

12 ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:12
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು